ವಿಷಯಕ್ಕೆ ಹೋಗು

ಸದಸ್ಯರ ಚರ್ಚೆಪುಟ:Neilprem

Page contents not supported in other languages.
ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಕುವೆಂಪು

== ಕವಿತೆ : ನೇಗಿಲಯೋಗಿ ==


ಭದ್ರಾವತಿಯ ದವಾಖಾನೆಯಲ್ಲಿ ಹುಟ್ಟಿತ್ತು 'ನೇಗಿಲಯೋಗಿ' ರೈತಗೀತೆ!

ಕುಪ್ಪಳಿಯ ಅಡಕೆ ತೋಟಕ್ಕೆ ಸಿಡಿಲು ಹೊಡೆದ ಘಟನೆಯನ್ನು ಕವಿ ನೆನಪಿನ ದೋಣಿಯಲ್ಲಿ ಸವಿವರವಾಗಿ ಕೊಟ್ಟಿದ್ದಾರೆ. ಅದೊಂದು ದುರ್ಘಟನೆ ಎಂದು ಭಾವಿಸಿದ ಮನೆಯವರು ಅದಕ್ಕೆ ಶಾಂತಿ ಮಾಡಿಸುವ ಕಾರ್ಯಕ್ರಮ ಇಟ್ಟುಕೊಳ್ಳುತ್ತಾರೆ. ಆದರೆ, ಕವಿಯ ಪಾಲಿಗೆ, ಸಿಡಿಲು ಹೊಡೆಯುವುದು ಬರಿಯ ನಿಸರ್ಗ ವ್ಯಾಪಾರ ಮಾತ್ರ. ಅದನ್ನು ದೋಷ ಎಂದು ಭಾವಿಸುವುದಾಗಲೀ, ಅದಕ್ಕೆ ಪುರೋಹಿತರನ್ನು ಕರೆಸಿ ಶಾಂತಿ ಮಾಡಿಸುವುದಾಗಲೀ ಮೌಢ್ಯವನ್ನು ಒಪ್ಪಿಕೊಂಡಂತೆಯೇ ಸರಿ. ಸಹಜವಾಗಿ ಕವಿ ಶಾಂತಿ ಮಾಡಿಸುವ ಕಾರ್ಯಕ್ರಮವನ್ನು ವಿರೋಧಿಸುತ್ತಾರೆ. ಅವರ ಬೆಂಬಲಕ್ಕೆ ತರುಣವರ್ಗ ನಿಲ್ಲುತ್ತದೆ. ಹಾರುವರ ಕೈಯಿಂದ ಪೂಜೆ ಮಾಡಿಸಿ ಸಮಾರಾಧನೆಯ ಊಟ ಹಾಕಿಸುವುದರಿಂದ ಸಿಡಿಲು ಬಡಿದು ಆಗಿರುವ ನಷ್ಟಕ್ಕೆ ಪರಿಹಾರ ದೊರೆಯುವುದಿಲ್ಲ ಎಂಬ ಇವರ ವಾದ ಮನೆಯವರ ನಂಬಿಕೆಯ ಎದುರಿಗೆ ಶಕ್ತಿ ಕಳೆದುಕೊಳ್ಳುತ್ತದೆ!

ಕಾರ್ಯಕ್ರಮಕ್ಕೆ ವಿರೋಧವಿದ್ದರೂ, ಅಂದು ಮಾಡಿದ್ದ ಊಟಕ್ಕೆ ವಿರೋಧ ಇರಬೇಕಿಲ್ಲವಷ್ಟೆ!? ಪುಳಿಚಾರಿನ ಸಿಹಿಯೂಟ. ಶೂದ್ರವರ್ಗಕ್ಕೆ ಅಷ್ಟೇನು ಆಧರಣೀಯವಲ್ಲದಿದ್ದರೂ ನಂಟರಿಷ್ಟರ ಜೊತೆ ಸೇರಿ ಕವಿಯೂ ಪಟ್ಟಾಗಿ ಹೊಡೆದುಬಿಡುತ್ತಾರೆ. ಮಿತ್ರರೊಂದಿಗೆ ಸ್ಪರ್ಧಿಸಿ ಹೋಳಿಗೆ ತುಪ್ಪ ಪಾಯಸ ಒಡೆ ಮುಂತಾದವುಗಳನ್ನು ಮೀರಿ ತಿನ್ನುತ್ತಾರೆ. ಕವಿಯೇ ಹೇಳುವಂತೆ ’ಪ್ರಚ್ಛನ್ನ ಯೌವನಮದವಶನಾಗಿ!’. ಆದರೆ ಅದರ ಪರಿಣಾಮ ಮಾತ್ರ ಭೀಕರವಾಗಿತ್ತು. ’ಅಶನಿ’ಗಾಗಿ ಮಾಡಿದ ಶಾಂತಿ ’ಶನಿ’ಯಾಗಿ ಕಾಡಿತ್ತು, ನ್ಯೂಮೋನಿಯಾ ರೂಪದಲ್ಲಿ!

ಮೊದಲು ಹೊಟ್ಟೆ ಕೆಟ್ಟು, ನಂತರ ಜ್ವರ ಕೆಮ್ಮು ಶುರುವಾಯಿತು. ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಕವಿ, ಕುಪ್ಪಳಿಯಲ್ಲಿ ಇದ್ದ ದಿನಗಳಲ್ಲಿ ಮಾಡುತ್ತಿದ್ದ ನಿತ್ಯ ಕಾಯಕವನ್ನು - ನಸುಕಿನಲ್ಲಿಯೇ ಕವಿಶೈಲಕ್ಕೆ ಹೋಗಿ ವ್ಯಾಯಾಮ ಪ್ರಾಣಾಯಮ ಧ್ಯಾನ -ನಿಲ್ಲಿಸಲಿಲ್ಲ. ಮಂಜು ಬೀಳುತ್ತಿದ್ದ ಸಮಯದಲ್ಲಿ ಆ ಕಾಯಕ ನಡೆಯುತ್ತಿದ್ದುದರಿಂದ ಜ್ವರ ಉಲ್ಬಣಗೊಂಡು ನ್ಯೂಮೋನಿಯಾ ಆಗಿಬಿಟ್ಟಿತು. ದೇವಂಗಿ ಆಸ್ಪತ್ರೆಯಿಂದ ಔಷಧಿಯನ್ನು ತಂದು ಕೊಟ್ಟರೂ ಜ್ವರ ಕಡಿಮೆಯಾಗಲಿಲ್ಲ. ಆಗಲೇ ಮೈಸೂರಿನಿಂದ ಬಂದ ಕಾಗದ ಅವರು ಎರಡೂ ಭಾಗದಲ್ಲಿಯೂ ಎರಡನೆ ಕ್ಲಾಸಿನಲ್ಲಿ ತೇರ್ಗಡೆಯಾದ ವಿಚಾರ ತಿಳಿಯುತ್ತದೆ. ಮನೆಯವರಿಗೆಲ್ಲಾ, ಊರವರಿಗೆಲ್ಲಾ ತಮ್ಮವನೊಬ್ಬ ಬಿ.ಎ. ಪಾಸಾದನಲ್ಲ ಎಂಬ ಹೆಮ್ಮೆ. ’ನನ್ನ ಬಿ.ಎ. ಪಾಸಿನಿಂದ ಯಾರಿಗೂ ಮೂರು ಕಾಸಿನ ಪ್ರಯೋಜನವಾಗದಿದ್ದರೂ ಎಲ್ಲರೂ ಸಂತೋಷಪಟ್ಟರು’ ಎನ್ನುತ್ತಾರೆ ಕವಿ.